ನಿಮಗೆ ಮೊದಲೊಮ್ಮೆ ಹೇಳಿದ್ದೆನಲ್ಲ.... ಬ್ಲಾಗೂರಲ್ಲೊಂದು ಪುಟ್ಟ ಅರಮನೆ ಕಟ್ಟುತ್ತಿದ್ದೇನೆ ಅಂತ ..ಬೇಕಾದರೆ ನೋಡಿ ಬನ್ನಿ..
( ಬನ್ನಿರಲ್ಲ...ಬ್ಲಾಗೂರ ನನ್ನ ಮನೆಗೆ .)
ಅಲ್ಲೀಗ ಹೂದೋಟ ಮಾಡಿದ್ದೇನೆ..
ಹೀಗೆ.... ನೋಡಲು ಬಂದವರು ಹೇಳಿದ್ದು...
ಕಟ್ಟುತ್ತಿದ್ದ ಹಾಗೆ ನಾಲ್ಕಾರು ಗಿಡ ಗೆನ್ಟೆ ನೆಡು....
ಉಪ್ಪರಿಗೆ ಕಟ್ಟುವಷ್ಟರಲ್ಲಿ ಗಿಡ ದೊಡ್ಡದಾಗಿ ಹೂ ಬಿಡುತ್ತೆ... ನೋಡಲು ಚಂದ....ಅಂತ..
ನಾನೂ ಆಚೀಚೆ , ಅಲ್ಲಿ ಇಲ್ಲಿ ಗಿಡ ಒಟ್ಟು ಮಾಡಿ ತಂದು ನೆಟ್ಟಿದ್ದೇನೆ...
ಈಗದು ಹೂಬಿಟ್ಟಿದೆ.ಎಲ್ಲಾ ತರದ್ದೂ ಇದೆ.
ಒಂದೊಂದು ಸಾಲಿನಲ್ಲಿ ಒಂದೊಂದು ತರ...
ಎಷ್ಟೊಂದು ಚಂದ ಅಂದ್ರೆ ...ಬಾಳ ಸುಂದರ..
ಮನೆ ಕಟ್ಟುವಾಗ ಸ್ವಲ್ಪ ಸಿಮೆಂಟು, ಮರಳಿನ ಧೂಳು ಬಿದ್ದಿರಬಹುದು....
ಆದರೂ ಚಂದವಿದೆ ....
ಕಾಂಪೌಂಡ್ ನ ಪಕ್ಕಕ್ಕೆ ಸಾಲಾಗಿ ಜಿನಿಯಾ ಹಾಕಿದ್ದೇನೆ...
ಬರುವವರಿಗೆಲ್ಲಾ ಸ್ವಾಗತ ಕೋರಲು ನಿ೦ತ ಸು೦ದರಿಯರ ತರ ಕಾಣುತ್ತೆ...

ತರತರದ ತರುಣಿಯರು...ಕಣ್ಣೆರಡು ಸಾಕಾಗಲಿಕ್ಕಿಲ್ಲ...ಚಂದ ಸವಿಯಲು..

ಮತ್ತೆ ಕಾಡುವ ಹುಡುಗರು ಹೂದೋಟದ ಸುತ್ತ ಸುತ್ತುತ್ತಲೇ ಇರುತ್ತಾರೆ... ಹೂಮುತ್ತಿನಾಸೆಗೆ ...

ಚಂಡು ಹೂ ಗೊತ್ತಲ್ಲವೇ...ಯಾವುದೋ ಒಣಗಿದ ಹೂಮಾಲೆ ಎಸೆದಿದ್ದು, ಬೀಜ ಉದುರಿ ಗಿಡ ಆಗಿತ್ತು .

ರಾತ್ರಿ ಉಪ್ಪರಿಗೆಯ ಬಾಲ್ಕನಿಯಲ್ಲಿ ನನ್ನವರೊಂದಿಗೆ ನಿಂತು ನೋಡಿದರೆ........ ಏನಂತ ಹೇಳಲಿ ......!! ಮೋಡಗಳ ಮರೆಯಲ್ಲಿ ಚಂದಿರ ಹೂ ನಗೆ ಚೆಲ್ಲಿದಂತೆಲ್ಲಾ...
ನಲ್ಲನಲ್ಲಿ ತುಂಟ ಕವಿ ಇಣುಕುತ್ತಾನೆ........!
ನಲ್ಲೆ ನಗುವಾಗಲೆಲ್ಲಾ....
ಮಾರಿ ಗೋಲ್ಡ್ ....
ಮತ್ತೆ ಕೋಪಿಸಿಕೊಂಡರಂತೂ....
ಹೆಮ್ಮಾರಿ ಗೋಲ್ಡ್...
ಮತ್ತೆ ಮಾರಿ ತಿರುವಷ್ಟರಲ್ಲಿ ....ಇನ್ನೊಂದು ಕವಿತೆ ರೆಡಿ.
ನಲ್ಲೆ ಮೊಗ ಕೆಂಗುಲಾಬಿ ....
ಮುನಿಸ ಮುಳ್ಳ ಬೇಗ ತೆಗಿ......

ಬಾನಲ್ಲಿ ಇಣುಕುವ ಬಿದಿಗೆ ಚಂದ್ರಮ ಪಳಕ್ಕನೆ ನಗುತ್ತಾನೆ...!!!!!
ಹಾಗೆ ಪಕ್ಕನೆ ಮೋಡದಲ್ಲಿ ಮರೆಯಾಗುತ್ತಾನೆ......
ಶಾಪದ ಭೀತಿಗಲ್ಲ..... ತಾರೆಯ ನೆನಪಾಗಿರಬೇಕು......!
ಮತ್ತೆ ಗುಲಾಬಿ ಗಿಡಗಳು ಹೂಬಿಟ್ಟು ಮುಡಿಯುವವರಿಗಾಗಿ ಕಾದಿವೆ..

ಮೈಯೆಲ್ಲಾ ಇಬ್ಬನಿಯಲ್ಲಿ ತೋಯಿಸಿಕೊಂಡು ಮಂದಹಾಸ ಬೀರುವ ಬಾಲೆಯಂತೆ ಕಾಣುತ್ತಾಳೆ.

ಮುತ್ತಿನ ಮಣಿಗಳಂತಿರುವ ಹನಿಯನ್ನು ಕೈಯಿಂದೊಮ್ಮೆ ಸವರಲೇ...... ಅನ್ನಿಸುವುದು.

ಮೊಗ್ಗುಗಳದು ಚಂದವೇ ಬೇರೆ.....
ಎಲೆ ಬಿಸಿಲಿಗೆ... ಹರಯಕ್ಕೆ ಕಾಲಿಡುವ ಬಯಕೆ ....ಅವಕ್ಕೆ ..

ತಲೆ ತುಂಬಾ ಸೆರಗ ಹೊದ್ದ ಪುಟಾಣಿ ವಧುವಿನಂತೆ ಕಂಗೊಳಿಸುವ ಬಯಕೆ ......ಹೇಳತೀರದು.

ಅಕ್ಕನ ಮದುವೆಯಲ್ಲಿ ತಂಗಿಯ ಸಡಗರಕ್ಕೇನು ಕೊರತೆ..
ಸಧ್ಯ.....! ನನಗೇನಿಲ್ಲ....
ಜವಾಬ್ಧಾರಿ ..... ಸಂಸಾರದ ಚಿಂತೆ.....!
ಗುಲಾಬಿಗಳ ವರ್ಣಿಸಿದ್ದು ಮುಗಿಯಿತಲ್ಲ..
ಸೇವಂತಿಗೆ ಕಣದ ಕಡೆ ಹೋಗೋಣ ಬನ್ನಿ....

ಕಣದಲ್ಲಿ ಚೆನ್ನಾಗಿ ಮಣ್ಣು, ಗೊಬ್ಬರ ಹಾಕಿ ಸೇವಂತಿಗೆ ಗಿಡ ನೆಟ್ಟರೆ ಚೆನ್ನಾಗಿ ಹೂ ಬಿಡುತ್ತವೆ.
ಬೆಳಗಿನ ಬಿಸಿಲು ಬಿದ್ದರೆ ಕೇಳುವುದೇ ಬೇಡ....
ಬೇರೆ ಬಣ್ಣದವೂ ಇವೆ...

ಹಳದಿ ಬಣ್ಣದವೆಂದರೆ ನನಗಿಷ್ಟ...

ಕುಂಡದಲ್ಲಿ ನೆಟ್ಟರೂ ಚೆಂದದ ಹೂಗಳು ಬಿಡುತ್ತವೆ...
ಇದನ್ನು ಹೊರ ಬಾಗಿಲ ಪಕ್ಕದಲ್ಲಿ ಮೆಟ್ಟಿಲ ಕೆಳಗೆ ಇಟ್ಟಿದ್ದೇನೆ.

ಇದು ಕಿಂಕರ ಅನ್ನುವ ಹೂಗಿಡ...ನಿಮ್ಮಲ್ಲೆಲ್ಲಾ ಏನಂತ ಕರೆಯುತ್ತೀರೋ....

ಇದು ಈಗ್ಸೋರ ....ಪೊದೆ ಆಗುವುದರಿಂದ ಕಾಂಪೌಂಡಿನ ಮೂಲೆಯಲ್ಲಿ ಜಾಗ ಕೊಟ್ಟಿದ್ದೇನೆ.
ಆದರೂ ಸಾಲಿನಲ್ಲಿ ಮುಂದೆ ಬಂದು ನಿಂತಂತೆ ಕಾಣುತ್ತೆ.
ಇದಕ್ಕೆ ಸ್ಟಾರ್ ಕ್ಲಸ್ಟರ್ ಅನ್ನುತ್ತಾರಂತೆ...
ಕಿಂಗ್ ಫಿಷರ್ ವಿಮಾನದ ಒಯ್ಯಾರದ ಗಗನಸಖಿಯಂತಿದ್ದಾಳೆ. ಕೆಂಪು ...ಕೆಂಪು...
ಇದ್ಯಾವುದರ ಹೂ ಹೇಳಿ....?
ಗೊತ್ತಾಗಲಿಲ್ವಾ .......!! ಟೊಮೇಟೊ ಹೂ .... ಅರ್ಜಂಟ್ ಗೆ ಸಾರಿಗೆ ಬೇಕಾಗುತ್ತೆ ನೋಡಿ...
ಇನ್ನೂ ಕೆಲವು ಹೆಸರೇ ಗೊತ್ತಿರದ ಗಿಡಗಳೂ ಇವೆ....
ಮುಂದಿನ ಸಲ ಯಾವಾಗಲಾದರೂ ತೋರಿಸಲೇ....
[ ಮತ್ತೆ ಏನೆಂದರೆ.....ಪಾಪ ಇಷ್ಟೆಲ್ಲಾ ಗಿಡ ಗೆನ್ಟೆ ಬೆಳೆಸಿದ್ದಾರೆ... ಯಾರಾದರೂ ಕಳ್ಳ, ಕಾಕರು ಹೂ ಕದ್ದರೆ.....ಅಂತ ನೀವು ಚಿಂತೆ ಮಾಡುವುದೇನೂ ಬೇಡ...
ಮೊನ್ನೆ ಊರಿಗೆ ಹೋದಾಗ '' ಈ ಹೂ ಬನಕ್ಕೆ ಸಿಗಂದೂರು ಚೌಡಿಯ ಕಾವಲಿದೆ ....'' ಅಂತ ಬೋರ್ಡ್ ಬರೆಸಿ, ಪೂಜೆ ಮಾಡಿಸಿಕೊಂಡು ಬಂದು ತಗುಲು ಹಾಕಿದ್ದೇನೆ.
ಈ ಕೆಲಸವನ್ನು ನನ್ನವರು ಮೆಚ್ಚಿ ಶ್ಲಾಘಿಸಿದ್ದಾರೆ.'' ಅಲ್ವೇ...ಇನ್ನೊಂದು ಬೋರ್ಡ್ ಬರೆಸಿಕೊಂಡು ಬಂದು ಭಾರತ,,, ಪಾಕ್,,, ಗಡಿಯಲ್ಲಿ ಹಾಕು... ಭಾರತ ದೇಶಕ್ಕೆ ಸಿಗಂದೂರು ಚೌಡೇಶ್ವರಿಯ ಕಾವಲಿದೆ..... ಅಂತ,,,,'' ಎಂದು ಉಚಿತವಾಗಿ , ಉಪಯುಕ್ತ ಸಲಹೆ ಕೊಟ್ಟಿದ್ದಾರೆ. ಈಗ ಪುರಸೊತ್ತಿಲ್ಲ .... ಮಕ್ಕಳಿಗೆ ಪರೀಕ್ಷೆ ,,ಮುಗಿಯುತ್ತಿದ್ದಂತೆ ಮದುವೆ, ಉಪನಯನ ಇತ್ಯಾದಿ ಕಾರ್ಯದ ಮನೆಗಳ ಸಾಲು ಸಾಲು .... ಮಳೆಗಾಲಕ್ಕೆ ಬಿತ್ತು.....ಬಿಡಿ.. ಚೌಡೇಶ್ವರಿಯ ವ್ಯಾಪ್ತಿ ವಿಸ್ತಾರವಾಗಿದೆ. ]
( ಬನ್ನಿರಲ್ಲ...ಬ್ಲಾಗೂರ ನನ್ನ ಮನೆಗೆ .)
ಅಲ್ಲೀಗ ಹೂದೋಟ ಮಾಡಿದ್ದೇನೆ..
ಹೀಗೆ.... ನೋಡಲು ಬಂದವರು ಹೇಳಿದ್ದು...
ಕಟ್ಟುತ್ತಿದ್ದ ಹಾಗೆ ನಾಲ್ಕಾರು ಗಿಡ ಗೆನ್ಟೆ ನೆಡು....
ಉಪ್ಪರಿಗೆ ಕಟ್ಟುವಷ್ಟರಲ್ಲಿ ಗಿಡ ದೊಡ್ಡದಾಗಿ ಹೂ ಬಿಡುತ್ತೆ... ನೋಡಲು ಚಂದ....ಅಂತ..
ನಾನೂ ಆಚೀಚೆ , ಅಲ್ಲಿ ಇಲ್ಲಿ ಗಿಡ ಒಟ್ಟು ಮಾಡಿ ತಂದು ನೆಟ್ಟಿದ್ದೇನೆ...
ಈಗದು ಹೂಬಿಟ್ಟಿದೆ.ಎಲ್ಲಾ ತರದ್ದೂ ಇದೆ.
ಒಂದೊಂದು ಸಾಲಿನಲ್ಲಿ ಒಂದೊಂದು ತರ...
ಎಷ್ಟೊಂದು ಚಂದ ಅಂದ್ರೆ ...ಬಾಳ ಸುಂದರ..
ಮನೆ ಕಟ್ಟುವಾಗ ಸ್ವಲ್ಪ ಸಿಮೆಂಟು, ಮರಳಿನ ಧೂಳು ಬಿದ್ದಿರಬಹುದು....
ಆದರೂ ಚಂದವಿದೆ ....
ಕಾಂಪೌಂಡ್ ನ ಪಕ್ಕಕ್ಕೆ ಸಾಲಾಗಿ ಜಿನಿಯಾ ಹಾಕಿದ್ದೇನೆ...
ಬರುವವರಿಗೆಲ್ಲಾ ಸ್ವಾಗತ ಕೋರಲು ನಿ೦ತ ಸು೦ದರಿಯರ ತರ ಕಾಣುತ್ತೆ...

ತರತರದ ತರುಣಿಯರು...ಕಣ್ಣೆರಡು ಸಾಕಾಗಲಿಕ್ಕಿಲ್ಲ...ಚಂದ ಸವಿಯಲು..
ಮತ್ತೆ ಕಾಡುವ ಹುಡುಗರು ಹೂದೋಟದ ಸುತ್ತ ಸುತ್ತುತ್ತಲೇ ಇರುತ್ತಾರೆ... ಹೂಮುತ್ತಿನಾಸೆಗೆ ...

ಚಂಡು ಹೂ ಗೊತ್ತಲ್ಲವೇ...ಯಾವುದೋ ಒಣಗಿದ ಹೂಮಾಲೆ ಎಸೆದಿದ್ದು, ಬೀಜ ಉದುರಿ ಗಿಡ ಆಗಿತ್ತು .

ರಾತ್ರಿ ಉಪ್ಪರಿಗೆಯ ಬಾಲ್ಕನಿಯಲ್ಲಿ ನನ್ನವರೊಂದಿಗೆ ನಿಂತು ನೋಡಿದರೆ........ ಏನಂತ ಹೇಳಲಿ ......!! ಮೋಡಗಳ ಮರೆಯಲ್ಲಿ ಚಂದಿರ ಹೂ ನಗೆ ಚೆಲ್ಲಿದಂತೆಲ್ಲಾ...
ನಲ್ಲನಲ್ಲಿ ತುಂಟ ಕವಿ ಇಣುಕುತ್ತಾನೆ........!
ನಲ್ಲೆ ನಗುವಾಗಲೆಲ್ಲಾ....
ಮಾರಿ ಗೋಲ್ಡ್ ....
ಮತ್ತೆ ಕೋಪಿಸಿಕೊಂಡರಂತೂ....
ಹೆಮ್ಮಾರಿ ಗೋಲ್ಡ್...
ಮತ್ತೆ ಮಾರಿ ತಿರುವಷ್ಟರಲ್ಲಿ ....ಇನ್ನೊಂದು ಕವಿತೆ ರೆಡಿ.
ನಲ್ಲೆ ಮೊಗ ಕೆಂಗುಲಾಬಿ ....
ಮುನಿಸ ಮುಳ್ಳ ಬೇಗ ತೆಗಿ......
ಬಾನಲ್ಲಿ ಇಣುಕುವ ಬಿದಿಗೆ ಚಂದ್ರಮ ಪಳಕ್ಕನೆ ನಗುತ್ತಾನೆ...!!!!!
ಹಾಗೆ ಪಕ್ಕನೆ ಮೋಡದಲ್ಲಿ ಮರೆಯಾಗುತ್ತಾನೆ......
ಶಾಪದ ಭೀತಿಗಲ್ಲ..... ತಾರೆಯ ನೆನಪಾಗಿರಬೇಕು......!
ಮತ್ತೆ ಗುಲಾಬಿ ಗಿಡಗಳು ಹೂಬಿಟ್ಟು ಮುಡಿಯುವವರಿಗಾಗಿ ಕಾದಿವೆ..

ಮೈಯೆಲ್ಲಾ ಇಬ್ಬನಿಯಲ್ಲಿ ತೋಯಿಸಿಕೊಂಡು ಮಂದಹಾಸ ಬೀರುವ ಬಾಲೆಯಂತೆ ಕಾಣುತ್ತಾಳೆ.

ಮುತ್ತಿನ ಮಣಿಗಳಂತಿರುವ ಹನಿಯನ್ನು ಕೈಯಿಂದೊಮ್ಮೆ ಸವರಲೇ...... ಅನ್ನಿಸುವುದು.

ಮೊಗ್ಗುಗಳದು ಚಂದವೇ ಬೇರೆ.....
ಎಲೆ ಬಿಸಿಲಿಗೆ... ಹರಯಕ್ಕೆ ಕಾಲಿಡುವ ಬಯಕೆ ....ಅವಕ್ಕೆ ..
ತಲೆ ತುಂಬಾ ಸೆರಗ ಹೊದ್ದ ಪುಟಾಣಿ ವಧುವಿನಂತೆ ಕಂಗೊಳಿಸುವ ಬಯಕೆ ......ಹೇಳತೀರದು.

ಅಕ್ಕನ ಮದುವೆಯಲ್ಲಿ ತಂಗಿಯ ಸಡಗರಕ್ಕೇನು ಕೊರತೆ..
ಸಧ್ಯ.....! ನನಗೇನಿಲ್ಲ....
ಜವಾಬ್ಧಾರಿ ..... ಸಂಸಾರದ ಚಿಂತೆ.....!
ಗುಲಾಬಿಗಳ ವರ್ಣಿಸಿದ್ದು ಮುಗಿಯಿತಲ್ಲ..
ಸೇವಂತಿಗೆ ಕಣದ ಕಡೆ ಹೋಗೋಣ ಬನ್ನಿ....
ಕಣದಲ್ಲಿ ಚೆನ್ನಾಗಿ ಮಣ್ಣು, ಗೊಬ್ಬರ ಹಾಕಿ ಸೇವಂತಿಗೆ ಗಿಡ ನೆಟ್ಟರೆ ಚೆನ್ನಾಗಿ ಹೂ ಬಿಡುತ್ತವೆ.
ಬೆಳಗಿನ ಬಿಸಿಲು ಬಿದ್ದರೆ ಕೇಳುವುದೇ ಬೇಡ....
ಬೇರೆ ಬಣ್ಣದವೂ ಇವೆ...

ಹಳದಿ ಬಣ್ಣದವೆಂದರೆ ನನಗಿಷ್ಟ...
ಕುಂಡದಲ್ಲಿ ನೆಟ್ಟರೂ ಚೆಂದದ ಹೂಗಳು ಬಿಡುತ್ತವೆ...
ಇದನ್ನು ಹೊರ ಬಾಗಿಲ ಪಕ್ಕದಲ್ಲಿ ಮೆಟ್ಟಿಲ ಕೆಳಗೆ ಇಟ್ಟಿದ್ದೇನೆ.
ಇದು ಕಿಂಕರ ಅನ್ನುವ ಹೂಗಿಡ...ನಿಮ್ಮಲ್ಲೆಲ್ಲಾ ಏನಂತ ಕರೆಯುತ್ತೀರೋ....
ಇದು ಈಗ್ಸೋರ ....ಪೊದೆ ಆಗುವುದರಿಂದ ಕಾಂಪೌಂಡಿನ ಮೂಲೆಯಲ್ಲಿ ಜಾಗ ಕೊಟ್ಟಿದ್ದೇನೆ.
ಆದರೂ ಸಾಲಿನಲ್ಲಿ ಮುಂದೆ ಬಂದು ನಿಂತಂತೆ ಕಾಣುತ್ತೆ.
ಇದಕ್ಕೆ ಸ್ಟಾರ್ ಕ್ಲಸ್ಟರ್ ಅನ್ನುತ್ತಾರಂತೆ...ಕಿಂಗ್ ಫಿಷರ್ ವಿಮಾನದ ಒಯ್ಯಾರದ ಗಗನಸಖಿಯಂತಿದ್ದಾಳೆ. ಕೆಂಪು ...ಕೆಂಪು...
ಇದ್ಯಾವುದರ ಹೂ ಹೇಳಿ....?
ಗೊತ್ತಾಗಲಿಲ್ವಾ .......!! ಟೊಮೇಟೊ ಹೂ .... ಅರ್ಜಂಟ್ ಗೆ ಸಾರಿಗೆ ಬೇಕಾಗುತ್ತೆ ನೋಡಿ...ಇನ್ನೂ ಕೆಲವು ಹೆಸರೇ ಗೊತ್ತಿರದ ಗಿಡಗಳೂ ಇವೆ....
ಮುಂದಿನ ಸಲ ಯಾವಾಗಲಾದರೂ ತೋರಿಸಲೇ....
[ ಮತ್ತೆ ಏನೆಂದರೆ.....ಪಾಪ ಇಷ್ಟೆಲ್ಲಾ ಗಿಡ ಗೆನ್ಟೆ ಬೆಳೆಸಿದ್ದಾರೆ... ಯಾರಾದರೂ ಕಳ್ಳ, ಕಾಕರು ಹೂ ಕದ್ದರೆ.....ಅಂತ ನೀವು ಚಿಂತೆ ಮಾಡುವುದೇನೂ ಬೇಡ...
ಮೊನ್ನೆ ಊರಿಗೆ ಹೋದಾಗ '' ಈ ಹೂ ಬನಕ್ಕೆ ಸಿಗಂದೂರು ಚೌಡಿಯ ಕಾವಲಿದೆ ....'' ಅಂತ ಬೋರ್ಡ್ ಬರೆಸಿ, ಪೂಜೆ ಮಾಡಿಸಿಕೊಂಡು ಬಂದು ತಗುಲು ಹಾಕಿದ್ದೇನೆ.
ಈ ಕೆಲಸವನ್ನು ನನ್ನವರು ಮೆಚ್ಚಿ ಶ್ಲಾಘಿಸಿದ್ದಾರೆ.'' ಅಲ್ವೇ...ಇನ್ನೊಂದು ಬೋರ್ಡ್ ಬರೆಸಿಕೊಂಡು ಬಂದು ಭಾರತ,,, ಪಾಕ್,,, ಗಡಿಯಲ್ಲಿ ಹಾಕು... ಭಾರತ ದೇಶಕ್ಕೆ ಸಿಗಂದೂರು ಚೌಡೇಶ್ವರಿಯ ಕಾವಲಿದೆ..... ಅಂತ,,,,'' ಎಂದು ಉಚಿತವಾಗಿ , ಉಪಯುಕ್ತ ಸಲಹೆ ಕೊಟ್ಟಿದ್ದಾರೆ. ಈಗ ಪುರಸೊತ್ತಿಲ್ಲ .... ಮಕ್ಕಳಿಗೆ ಪರೀಕ್ಷೆ ,,ಮುಗಿಯುತ್ತಿದ್ದಂತೆ ಮದುವೆ, ಉಪನಯನ ಇತ್ಯಾದಿ ಕಾರ್ಯದ ಮನೆಗಳ ಸಾಲು ಸಾಲು .... ಮಳೆಗಾಲಕ್ಕೆ ಬಿತ್ತು.....ಬಿಡಿ.. ಚೌಡೇಶ್ವರಿಯ ವ್ಯಾಪ್ತಿ ವಿಸ್ತಾರವಾಗಿದೆ. ]



